ಲಖನೌ: ರೈತರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನಿರ್ದೇಶನ ನೀಡಿದ್ದಾರೆ.
ವ್ಯಾಪಾರ ಸಂಬಂಧ ನಗರಕ್ಕೆ ಬರುವ ರೈತರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯಲು ನೀರು ಮತ್ತು ವಸತಿ ಸೌಕರ್ಯ ಕಲ್ಪಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಯಾದ ರಾಹುಲ್ ಭಟ್ನಾಗರ್ ಅವರಿಗೆ ನಿರ್ದೇಶಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವ್ಯಾಪಾರ ಸಂಬಂಧ ನಗರಕ್ಕೆ ಬರುವ ರೈತರಿಗೆ ಯಾವುದೇ ತೊಂದರೆ ಆಗದಂತೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆದೇಶಿಸಿದ್ದಾರೆ ಎಂದು ರಾಹುಲ್ ಭಟ್ನಾಗರ್ ಹೇಳಿದ್ದಾರೆ.