ಈ ಹಿಂದೆ ಸಾಕಷ್ಟು ಚುನಾವಣೆಗಳು ನಡೆದಿವೆ. ಆಗಲೂ ಇವಿಎಂ ಬಳಸಲಾಗಿದೆ. ಆಗೆಲ್ಲಾ ಗೆಲವು ಸಾಧಿಸಿದ್ದಾಗ ಈ ರೀತಿಯ ಪ್ರಶ್ನೆಗಳನ್ನೇಕೆ ಎತ್ತಲಿಲ್ಲ ಎಂದು ಪ್ರಶ್ನಿಸಿದರು. ರವಿ ಶಂಕರ್ ಪ್ರಸಾದ್ ಅವರು ಈ ಪ್ರಶ್ನೆ ಕೇಳುತ್ತಿದ್ದಂತೆಯೇ ಸಚಿವರ ಪ್ರತಿಕ್ರಿಯೆಗೆ ತೃಪ್ತಿಗೊಳ್ಳದ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು.