ಖಂಡಿತಾ ಅವರು ನನಗಿಂತ ಹಿರಿಯರು. ಆದರೆ ಕೆಲಸದ ವಿಚಾರ ಬಂದಾಗ ನನಗಿಂತ ಅವರು ತುಂಬಾ ಚಿಕ್ಕವರು. ಅಕ್ರಮ ಕಸಾಯಿಖಾನೆ ಮುಚ್ಚುವಿಕೆ, ಅಕ್ರಮ ಮಾಂಸದಂಗಡಿಗಳ ಬಂದ್ ಇತ್ಯಾದಿ ಘಟನೆಗಳು ಉತ್ತರ ಪ್ರದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅಖಿಲೇಶ್ ಯಾದವ್, ಯೋಗಿಯವರ ಚಿತ್ರವನ್ನು ಹಾಕಿಕೊಂಡು ಈ ವಿಷಯಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ. ಈ ಹಿಂದೆ ನನ್ನ ಚಿತ್ರ ಬಳಸಿಕೊಂಡು ಮಾಧ್ಯಮಗಳು ವರದಿ ನೀಡುತ್ತಿದ್ದವು. ಅದೇ ರೀತಿ ಈಗ ನಡೆಯುತ್ತಿದೆಯೇ ಹೊರತು ಹೆಚ್ಚಿನ ವಿಶೇಷವಿಲ್ಲ ಎಂದರು.