ಕೊಚ್ಚಿ: ಖ್ಯಾತ ವಕೀಲ ರಾಮ್ ಜೇಠ್ಮಲಾನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಕಡಿಮೆ ರಕ್ತದೊತ್ತಡದಿಂದ...
ರಾಮ್ ಜೇಠ್ಮಲಾನಿ
ರಾಮ್ ಜೇಠ್ಮಲಾನಿ
ಕೊಚ್ಚಿ: ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಕಡಿಮೆ ರಕ್ತದೊತ್ತಡದಿಂದ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 
ಅವರು ಕೇರಳದ ಕೊಚ್ಚಿಯಲ್ಲಿ ಸನ್ಮಾನ ಸಮಾರಂಭವೊಂದರಲ್ಲಿ ಭಾಗವಹಿಸಲು ತೆರಳಿದ್ದರು. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ. ವಕೀಲ ವೃತ್ತಿಯಲ್ಲಿ 75 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಕೇರಳ ಹೈಕೋರ್ಟ್ ನ ಕ್ರಿಮಿನಲ್ ಲಾಯರ್ಸ್ ಗಳು ಸನ್ಮಾನ ಸಮಾರಂಭವನ್ನು ಆಯೋಜಿಸಿದ್ದರು. ಜೇಠ್ಮಲಾನಿಯವರ ಅನಾರೋಗ್ಯ ಹಿನ್ನಲೆಯಲ್ಲಿ ನಂತರ ಕಾರ್ಯಕ್ರಮ ರದ್ದಾಯಿತು ಎಂದು ವಕೀಲ ಬಾಬು ಎಸ್ ನಾಯರ್ ತಿಳಿಸಿದ್ದಾರೆ.
ಆದರೆ ಈ ಬಗ್ಗೆ ಜೇಠ್ಮಲಾನಿ ದಾಖಲಾಗಿರುವ ಖಾಸಗಿ ಆಸ್ಪತ್ರೆಯಿಂದ ಯಾವುದೇ ಹೇಳಿಕೆ ಬಂದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com