ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಸುಧಾನ್ಶು ತ್ರಿವೇದಿಯವರು, ಇದೊಂದು ನ್ಯಾಯಾಂಗ ಪ್ರಕ್ರಿಯೆ. ಆಮ್ ಆದ್ಮಿ ಪಕ್ಷ ಪ್ರಕರಣ ಸಂಬಂಧ ವಿಚಾರಣೆಗೆ ತಡ ಮಾಡುತ್ತಿದೆ. ಇದೀಗ ಚಾರ್ಜ್ ಶೀಟ್ ದಾಖಲು ಮಾಡಲಾಗಿದ್ದು, ಶೀಘ್ರದಲ್ಲೇ ವಿಚಾರಣೆ ಆರಂಭವಾಗಲಿದೆ. ಆ ವರೆಗೂ ಆಮ್ ಆದ್ಮಿ ಪಕ್ಷ ಯಾವ ಯಾವ ಅವಹೇಳನಕಾರಿ ಹೇಳಿಕೆಯನ್ನು ನೀಡಿವೆಯೋ, ಆ ಹೇಳಿಕೆಗಳ ಬಗ್ಗೆಯೆಲ್ಲಾ ಅವರ ಬಳಿ ದಾಖಲೆಗಳಿವೆ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ.