ಮಣಿಪುರದಲ್ಲಿ ಕಂದಕಕ್ಕೆ ಉರುಳಿದ ಬಸ್, 10 ಸಾವು

ಮಣಿಪುರದ ಸೆನಾಪತಿ ಜಿಲ್ಲೆಯಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ...
ಕಂದಕಕ್ಕೆ ಉರುಳಿದ ಬಸ್(ಸಂಗ್ರಹ ಚಿತ್ರ)
ಕಂದಕಕ್ಕೆ ಉರುಳಿದ ಬಸ್(ಸಂಗ್ರಹ ಚಿತ್ರ)
ಇಂಪಾಲ: ಮಣಿಪುರದ ಸೆನಾಪತಿ ಜಿಲ್ಲೆಯಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಮಕಾನ್ ಮತ್ತು ಚಕುಮೈ ಬಳಿಯ ಇಂಪಾಲ-ಧಿಮಾಪುರ್ ರಾಷ್ಟ್ರೀಯ ಹೆದ್ದಾರಿ 39ರಲ್ಲಿ ಬೆಳ್ಳಂ ಬೆಳಗ್ಗೆ 3.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು 25 ಮಂದಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಬಸ್ ಇಂಪಾಲದ ಕಡೆ ಬರುತ್ತಿದ್ದಾಗ ದುರಂತ ಸಂಭವಿಸಿದೆ. ದುರಂತಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com