ತ್ರಿಪುರದಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ

16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ ಘಟನೆ ಉತ್ತರ ತ್ರಿಪುರ ಜಿಲ್ಲೆಯ ಧರ್ಮಾನಗರದಲ್ಲಿ ನಡೆದಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಅಗರತಾಲ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ ಘಟನೆ ಉತ್ತರ ತ್ರಿಪುರ ಜಿಲ್ಲೆಯ ಧರ್ಮಾನಗರದಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಕಳೆದ ಶನಿವಾರ ಸಂಜೆ 9ನೇ ತರಗತಿ ವಿದ್ಯಾರ್ಥಿನಿಗೆ ಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಣಿಕ್ ದಾಸ್ ಅವರು ಹೇಳಿದ್ದಾರೆ.
ನಗರದ ಲಿಂಕ್ ರಸ್ತೆಯಲ್ಲಿ ಯಾರೂ ಇಲ್ಲದ ಮನೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಆಕೆಯ ದೇಹದ ಮೇಲೆ ಹಲವು ಗಾಯಗಳಾಗಿವೆ ಎಂದು ದಾಸ್ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ನಿನ್ನೆ ರಜತ್ ತಂತಿ(22) ಎಂಬ ಯುವಕನನ್ನು ಬಂಧಿಸಿದ್ದು, ಆರೋಪಿ ತಾನು ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com