ಆರೋಪ ಹಿನ್ನಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಶಶೀಂದ್ರನ್ ಅವರು ನಾನು ಯಾವುದೇ ತಪ್ಪನ್ನು ಮಾಡಿಲ್ಲ. ಈ ಬಗ್ಗೆ ನನಗೆ ವಿಶ್ವಾಸವಿದೆ. ರಾಜೀನಾಮೆ ಸಲ್ಲಿಸುತ್ತಿದ್ದೇನೆಂದರೆ ನಾನು ಆರೋಪವನ್ನು ಒಪ್ಪಿಕೊಂಡಿದ್ದೇನೆಂದಲ್ಲ. ಮಲಪ್ಪುರಂನಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಎಲ್'ಡಿಎಫ್ ಗೆ ಮುಜುಗರ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗುವುದು ನನಗಿಷ್ಟವಿಲ್ಲ. ಹೀಗಾಗಿ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ಆರೋಪ ಸಂಬಂಧ ತನಿಖೆ ನಡೆಯಲು. ಸತ್ಯಾಂಶ ಹೊರಬರಲಿ ಎಂದು ಹೇಳಿದ್ದಾರೆ.