ತಕ್ಷಣವೇ ಪರಿಸ್ಥಿತಿಯ ತೀವ್ರತೆಯನ್ನು ಅರ್ಥ ಮಾಡಿಕೊಂಡ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಮ್ಮ ಗಮನಕ್ಕೆ ವಿಷಯವನ್ನು ತಂದದ್ದಕ್ಕಾಗಿ ಸಾಕ್ಷಿ ಸಿಂಗ್ ಗೆ ಧನ್ಯವಾದ ಹೇಳಿದರು. ತಕ್ಷಣವೇ ಟ್ವೀಟ್ ಮಾಡಿದ ರವಿಶಂಕರ್ ಪ್ರಸಾದ್, ನನ್ನ ಗಮನಕ್ಕೆ ವಿಷಯ ತಂದದ್ದಕ್ಕಾಗಿ ಧನ್ಯವಾದಗಳು. ಖಾಸಗಿ ಮಾಹಿತಿಗಳನ್ನು ಹಂಚಿಕೊಳ್ಳುವುದು ಅಕ್ರಮ. ಇದರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು'' ಎಂದು ಹೇಳಿದರು.