ಉತ್ತರ ಪ್ರದೇಶ ಮಾದರಿಯನ್ನು ಅನುಸರಿಸಲು ಮುಂದಾಗಿರುವ ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳು, ಅಕ್ರಮ ಕಸಾಯಿಖಾನೆಗಳಿಗೆ ಬೀಗ ಜಡಿಯುವ ಪ್ರಕ್ರಿಯೆಗೆ ಚಾಲನೆ ನೀಡಿವೆ. ಉತ್ತರ ಪ್ರದೇಶದ ಮಾದರಿಯನ್ನು ಮೊದಲು ಅಳವಡಿಸಿಕೊಂಡ ರಾಜ್ಯ ಜಾರ್ಖಂಡ್ ಆಗಿದೆ. ಹರಿದ್ವಾರದಲ್ಲಿ ಈ ವರೆಗೂ 3 ಮಾಂಸದ ಅಂಗಡಿಗಳು ಬಂದ್ ಆಗಿದ್ದರೆ, ಇಂದೋರ್, ರಾಯ್ ಪುರಗಳಲ್ಲಿ 11 ಕಸಾಯಿಖಾನೆಗಳನ್ನು ಬಂದ್ ಮಾಡಿಸಲಾಗಿದೆ.