ಮೀರತ್: ವಂದೇ ಮಾತರಂ ಹಾಡಲು ನಿರಾಕರಿಸಿದ ಮೀರತ್ ಪುರಸಭೆ ಸದಸ್ಯರಿಗೆ ಸಭೆಯಲ್ಲಿ ಭಾಗವಹಿಸದಂತೆ ನಿಷೇಧ ವಿಧಿಸಲಾಗಿದೆ.
ರಾಷ್ಟ್ರಗೀತೆಗೆ ಸಂಬಂಧಿಸಿದಂತೆ ಆಡಳಿತಾರೂಢ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷಗಳ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿದೆ. ಈ ವೇಳೆ ಕೆಲವು ಸದಸ್ಯರು ವಂದೇ ಮಾತರಂ ಹಾಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದಸ್ಯರಿಗೆ ಸಭೆಯಲ್ಲಿ ಭಾಗವಹಿಸದಂತೆ ನಿಷೇಧ ವಿಧಿಸಲಾಗಿರುವ ನಿರ್ಣಯವನ್ನು ಮೇಯರ್ ಹರಿಕಾಂತ್ ಅಹ್ಲುವಾಲಿಯಾ ಪ್ರಕಟಿಸಿದ್ದಾರೆ.
ವಂದೇ ಮಾತರಂ ಗೀತೆಯನ್ನು ಹಾಡಲು 7 ಕಾರ್ಪೊರೇಟರ್ ಗಳು ನಿರಾಕರಿಸಿದ್ದು, ಅಲ್ಪಸಂಖ್ಯಾತ ಸಮುದಾಯದವರಾಗಿದ್ದಾರೆ. ಸಭೆಯಲ್ಲಿ ಭಾಗವಹಿಸಿದ್ದ ಉಳಿದ ಸದಸ್ಯರುಗಳು ವಂದೇ ಮಾತರಂ ಹಾಡಲು ಪ್ರಾರಂಭಿಸುತ್ತಿದ್ದಂತೆಯೇ 7 ಸದಸ್ಯರು ಸಭೆಯಿಂದ ಹೊರ ನಡೆದಿದ್ದಾರೆ.
ಸಭೆ ಪ್ರಾರಂಭವಾಗುತ್ತಿದ್ದಂತೆಯೇ ಮೇಯರ್ ಹರಿಕಾಂತ್ ಅಹ್ಲುವಾಲಿಯಾ ರಾಷ್ಟ್ರಗೀತೆ ಹಾಡುವಂತೆ ಎಲ್ಲಾ ಸದಸ್ಯರಿಗೂ ಸೂಚನೆ ನೀಡಿದರು. ಇದೇ ವೇಳೆಯಲ್ಲಿ ಬಿಜೆಪಿ ಕೌನ್ಸಿಲರ್ ಗಳು ಹಿಂದೂಸ್ಥಾನದಲ್ಲಿರಬೇಕಾದರೆ ವಂದೇ ಮಾತರಂ ಹೇಳಬೇಕು ಎಂದು ಘೋಷಣೆ ಕೂಗಿದ್ದರು. ಈ ಬೆನಲ್ಲೇ ವಿರೋಧಪಕ್ಷದ ಕೆಲವು ಸದಸ್ಯರು ಸಭೆಯಿಂದ ಹೊರನಡೆದಿದ್ದಾರೆ ಎಂದು ತಿಳಿದುಬಂದಿದೆ.