ಪಂಚ ಸದಸ್ಯ ಪೀಠಕ್ಕೆ ತ್ರಿವಳಿ ತಲಾಖ್ ಪ್ರಕರಣವನ್ನು ವರ್ಗಾಯಿಸುವ ಬಗ್ಗೆ ಸುಪ್ರೀಂ ಕೋರ್ಟ್ ಕಳೆದ ತಿಂಗಳೇ ಸುಳಿವು ನೀಡಿತ್ತು. ತ್ರಿವಳಿ ತಲಾಖ್ ಕಾನೂನು ಬಾಹೀರವಾಗಿದ್ದು, ಅಲ್ಪಸಂಖ್ಯಾತ ಮಹಿಳೆಯರ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂಬ ಬಗ್ಗೆ ದೇಶಾದ್ಯಂತ ಚರ್ಚೆ ನಡೆದಿತ್ತು. ತ್ರಿವಳಿ ತಲಾಖ್ ಪದ್ಧತಿಯನ್ನು ವಿರೋಧಿಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದು, ಲಿಂಗ ತಾರತಮ್ಯವನ್ನು, ಸಹಿಸುವುದಿಲ್ಲ ಎಂದು ಕೋರ್ಟ್ ಗೆ ಹೇಳಿದೆ.