ಇದರಂತೆಯೇ ಮತ್ತೊಂಬ್ಬ ಕಾಂಗ್ರೆಸ್ ನಾಯಕ ಪಿ.ಎಲ್. ಪುಣ್ಯ ಅವರು ಕೂಡ ಹೇಳಿಕೆಯನ್ನು ನೀಡಿದ್ದು, ರಾಷ್ಟ್ರೀಯ ಗೀತೆ ಹಾಡುವಂತೆ ಜನರನ್ನು ಬಲವಂತ ಮಾಡುವುದು ನಿಜಕ್ಕೂ ಸರಿಯಲ್ಲ. ಯಾವುದೇ ಧರ್ಮದ ಬಗ್ಗೆ ನಾನು ವ್ಯಾಖ್ಯಾನ ನೀಡಲು ನಾನು ಇಚ್ಛಿಸುವುದಿಲ್ಲ. ಆಧರೆ, ಹಿಂದೂಸ್ತಾನ್ ಜಿಂದಾಬಾದ್ ಹಾಗೂ ವಂದೇ ಮಾತರಂ ನಡುವೆ ಯಾವುದೇ ಭಿನ್ನತೆಗಳಿಲ್ಲ ಎಂಬುದನ್ನು ನಾನು ನಂಬಿದ್ದೇನೆ. ಎರಡೂ ಗೀತೆಗಳೂ ರಾಷ್ಟ್ರಕ್ಕೆ ಸಂಬಂಧಿಸಿದ್ದು. ವ್ಯಕ್ತಿಯನ್ನು ವಂದೇ ಮಾತರಂ ಗೀತೆಯನ್ನೇ ಹಾಡಬೇಕೆಂದು ಒತ್ತಡ ಹೇರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.