ಪಾಕ್ ಪ್ರಾಯೋಜಿತ ಭಯೋತ್ಪಾದನೆಯಿಂದ ಪ್ರೇರಿತರಾಗಬೇಡಿ: ಕಾಶ್ಮೀರಿ ಯುವಕರಿಗೆ ರಾಜನಾಥ್ ಸಿಂಗ್ ಸಲಹೆ

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ತಮ್ಮ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದು, ಇದರಿಂದ ಕಾಶ್ಮೀರದ ಯುವಕರು ಪ್ರಭಾವಿತರಾಗಬಾರದು ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ತಮ್ಮ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದು, ಇದರಿಂದ ಕಾಶ್ಮೀರದ ಯುವಕರು ಪ್ರಭಾವಿತರಾಗಬಾರದು ಎಂದು ಕೇಂದ್ರ ಗೃಹ ಸಚಿವ  ರಾಜನಾಥ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಕಾಶ್ಮೀರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರು, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯಭೀತಿ  ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆ ಮೂಲಕ ರಾಜ್ಯವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು, ಅವರಿಗೆ ನಾವು ಸರಿಯಾದ ರೀತಿಯಲ್ಲಿಯೇ ಉತ್ತರವನ್ನು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

"ಭದ್ರತಾ ಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವಾಗ ಆವರ ಮೇಲೆ ಕಲ್ಲು ತೂರಾಟ ನಡೆಸುವುದು ಇತ್ತೀಚೆಗೆ ಹೊಸ ಟ್ರೆಂಡ್ ಆಗಿ ಹೋಗಿದೆ. ಕಲ್ಲು ತೂರಾಟ ನಡೆಸುವವರು ಪಾಕಿಸ್ತಾನ ಪಡೆಗಳ ಕಡೆಗೆ  ಪ್ರಭಾವಿತರಾಗಿದ್ದಾರೆ. ಇಂತರರ ಪ್ರಭಾವಕ್ಕೆ ಒಳಗಾಗದಂತೆ ನಾನು ಈ ಮೂಲಕ ಕಾಶ್ಮೀರಿ ಯುವಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಜನರನ್ನು ಒಗ್ಗೂಡಿಸಲು ಪಾಕಿಸ್ತಾನದ ಭಯೋತ್ಪಾದಕರು ಸಾಮಾಜಿಕ ಜಾಲತಾಣಗಳನ್ನು  ಬಳಕೆ ಮಾಡುತ್ತಿದ್ದಾರೆ. ಭಯೋತ್ಪಾದನೆಯನ್ನು ಮಟ್ಟಹಾಕುವಲ್ಲಿ ಭಾರತ ಯಶಸ್ವಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್ ಅವರು, ಪಾಕಿಸ್ತಾನದ ಕಾಶ್ಮೀರ ಯುವಕರನ್ನು ತನ್ನ ಪ್ರಭಾವಕ್ಕೊಳಗಾಗುವಂತೆ ಮಾಡುತ್ತಿದ್ದು, ಎನ್ ಕೌಂಟರ್ ಸ್ಥಳದಲ್ಲಿ ಕಲ್ಲು ತೂರಾಟ  ನಡೆಯುವಂತೆ ಮಾಡುತ್ತಿದೆ. ಜನರು ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದು ಕಾಶ್ಮೀರ ಹಾಗೂ ದೇಶದ ಶಾಂತಿ ಹಳಸು ಮಾಡುತ್ತಿದೆ ಎಂದು ಹೇಳಿದ್ದರು.

ಎನ್ ಕೌಂಟರ್ ಆರಂಭವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗತೊಡಗುತ್ತದೆ. ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಪಡೆದುಕೊಳ್ಳುವ ಕಾಶ್ಮೀರ ಯುವಕರು ಸ್ಥಳಕ್ಕೆ ಬಂದು ಉಗ್ರರು  ತಪ್ಪಿಸಿಕೊಳ್ಳುವ ಸಲುವಾಗಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಾರೆ. ಈ ಬಗ್ಗೆ ನಾವು ಪರಿಶೀಲನೆ ನಡೆಸಿದ್ದು, ಇಂತಹ ಸಾಕಷ್ಟು ನೆಟ್ ವರ್ಕ್ ಗಳು ಪಾಕಿಸ್ತಾನದಲ್ಲಿರುವುದಾಗಿ ಪತ್ತೆಯಾಗಿವೆ ಎಂದು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com