ಇದಕ್ಕೆ ಉತ್ತರಿಸಿದ ನ್ಯಾಯಪೀಠ, ವಿಚಾರಣೆಯನ್ನು ತ್ವರಿತವಾಗಿ ಮುಗಿಸಲು ಸಾಧ್ಯವಿಲ್ಲ ಎಂದು ಹೇಳಿತು. ಇದಕ್ಕೂ ಮುನ್ನ ಮೊನ್ನೆ 21ರಂದು ಸುಪ್ರೀಂ ಕೋರ್ಟ್, ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದವನ್ನು ಕೋರ್ಟ್ ಹೊರಗೆ ಇತ್ಯರ್ಥಪಡಿಸುವಂತೆ ಸಲಹೆ ನೀಡಿತ್ತು. ಧಾರ್ಮಿಕತೆ ಮತ್ತು ಭಾವನೆಗಳಿಗೆ ಸಂಬಂಧಪಟ್ಟ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸುವುದು ಉತ್ತಮ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.