ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೀರಭದ್ರ ಸಿಂಗ್ ಅವರು, ಬಿಜೆಪಿ ಪಕ್ಷ ಹಾಗೂ ನಾಯಕರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಹೋರಾಟ ಆರಂಭವಾಗಿದೆ. ಶೀಘ್ರದಲ್ಲಿಯೇ ಸತ್ಯಾಂಶ ಹೊರಬರಲಿದೆ. ನನ್ನ ವಿರುದ್ಧವಿರುವ ಎಲ್ಲಾ ಆರೋಪಗಳು ಪೂರ್ವನಿಯೋಜಿತವಾದದ್ದು. ಪ್ರೇಮ್ ಕುಮಾರ್ ಮತ್ತು ಅನುರಾಗ್ ಠಾಕೂರ್ ರಂತಹ ಬಿಜೆಪಿ ನಾಯಕರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯಾಂಶಗಳಿಲ್ಲ ಎಂದು ತಿಳಿಸಿದ್ದಾರೆ.