2009ರಿಂದ 2011ರವರೆಗೆ ಯುಪಿಎ ಸರ್ಕಾರದಲ್ಲಿ ಉಕ್ಕು ಸಚಿವರಾಗಿದ್ದ ವೇಳೆ ವೀರಭದ್ರ ಸಿಂಗ್ ಅವರು ರೂ.6.1 ಕೋಟಿ ಅಕ್ರಮ ಆಸ್ತಿ ಗಳಿಸಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಪ್ರಕರಣ ಸಂಬಂಧ ಸಿಬಿಐ ಆಧಿಕಾರಿಗಳು ವೀರಭದ್ರ ಸಿಂಗ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಅಲ್ಲದೆ, ಎಫ್ಐಆರ್ ಸಂಬಂಧ ಪ್ರಾಥಮಿಕ ತನಿಖೆಗೆ ಹಾಜರಾಗುವಂತೆ 2015ರ ಸೆ.23ರಂದು ಸಮನ್ಸ್ ಜಾರಿ ಮಾಡಿತ್ತು.