ಪೋಲ್ಯಾಂಡ್ ನಲ್ಲಿ ಹಲ್ಲೆಗೊಳಗಾದ ಭಾರತೀಯ ವಿದ್ಯಾರ್ಥಿ ಜೀವಂತವಾಗಿದ್ದಾನೆ: ಸುಷ್ಮಾ ಸ್ಪಷ್ಟನೆ

ಪೋಲ್ಯಾಂಡ್ ನಲ್ಲಿ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಜೀವಂತವಾಗಿದ್ದಾನೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ...
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್

ನವದೆಹಲಿ: ಪೋಲ್ಯಾಂಡ್ ನಲ್ಲಿ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಜೀವಂತವಾಗಿದ್ದಾನೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಪೊಲ್ಯಾಂಡ್ ನಲ್ಲಿ ರುವ ಭಾರತೀಯ ರಾಯಭಾರ ಅಧಿಕಾರಿ ಅಜಯ್ ಬಿಸಾರಿಯಾ ಜೊತೆ ಮಾತನಾಡಿರುವ ಸುಷ್ಮಾ ಸ್ವರಾಜ್ ಹಲ್ಲೆ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ, ಆದರೆ ಹಲ್ಲೆಗೊಳಗಾದ ವಿದ್ಯಾರ್ಥಿ ಹೆಸರನ್ನು ಬಹಿರಂಗಗೊಳಿಸಿಲ್ಲ.

ಪೋಲ್ಯಾಂಡ್ ನಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದು ಆತ ಸಾವನ್ನಪ್ಪಿದ್ದಾನೆ ಎಂದು ನೆಟ್ಟಿಜನರಿಂದ ವಿಷಯ ತಿಳಿದುಕೊಂಡ ಸುಷ್ಮಾ, ಈ ಸಂಬಂಧ ರಾಯಭಾರ ಕಚೇರಿ ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಭಾರತೀಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದದ್ದು ನಿಜ. ಅದೃಷ್ಟ ವಶಾತ್ ಆತ ಬದುಕುಳಿದಿದ್ದಾನೆ, ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಲ್ಲೂ ನಾವು ತನಿಖೆ ನಡೆಸುತ್ತೇವೆ, ಈ ಸಂಬಂಧ ವರದಿ ಪಡೆದುಕೊಳ್ಳಲಾಗುವುದು ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com