ಸಂಜಯ್ ಚಂದ್ರ ಹಾಗೂ ಅಜಯ್ ಚಂದ್ರ ಅವರ ಅಕ್ರಮ ಹಣ ವರ್ಗಾವಣೆ ಮತ್ತು ಗ್ರಾಹಕರಿಗೆ ವಂಚಿಸಿದ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಯ ಅಗತ್ಯವಿದ್ದು, ಆರೋಪಿಗಳನ್ನು ಮೂರು ದಿನಗಳ ಕಾಲ ನಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಆದರೆ ಇದಕ್ಕೆ ಆರೋಪಿಗಳ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಅಂತಿಮವಾಗಿ ಎರಡು ದಿನ ಪೊಲೀಸ್ ವಶಕ್ಕೆ ನೀಡಿದೆ.