ಕಳೆದ ಏಪ್ರಿಲ್ 17ರಂದು ಪಾಕಿಸ್ತಾನ ಸೈನಿಕರು ರಜೌರಿಯ ಜನವಾಸ ಪ್ರದೇಶದ ಮತ್ತು ಭಾರತೀಯ ಸೇನಾ ನೆಲೆಗಳ ಮೇಲೆ ಗುಂಡಿನ ದಾಳಿ ನಡೆಸಿತ್ತು ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ಸುರಿಮಳೆ ಗೈದಿದ್ದರು. ಇದರಲ್ಲಿ ಪಾಕಿಸ್ತಾನದ 10 ಸೈನಿಕರು ಬಲಿಯಾಗಿದ್ದು ಇದಕ್ಕೆ ಪ್ರತೀಕಾರವಾಗಿ ಭಾರತದ ಮೇಲೆ ದಾಳಿ ನಡೆಸುವಂತೆ ಬಜ್ವಾ ಆದೇಶಿಸಿದ್ದರು ಎಂದು ಪತ್ರಿಕೆ ವರದಿ ಮಾಡಿದೆ.