ಕಳೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ರಚಿಸಲಾಗಿದ್ದ ಮಹಾಘಟಬಂಧನ್ ರೀತಿ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಲು ಮಹಾ ಮೈತ್ರಿ ರಚಿಸಲಾಗುವುದು ಎಂದು ಲಾಲು ತಿಳಿಸಿದ್ದಾರೆ. ಅಲ್ಲದೆ ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಹಾಗೂ ಬೀಜು ಪಟ್ನಾಯಕ್ ಸೇರಿದಂತೆ ಹಲವು ಸಮಾಜವಾದಿ ನಾಯಕರಿಗೆ ಆಹ್ವಾನ ನೀಡುವುದಾಗಿ ತಿಳಿಸಿದ್ದಾರೆ.