ಭ್ರಷ್ಟಾಚಾರ ಆರೋಪವಿಲ್ಲದ, ಸಿಬಿಐ ವಿಚಾರಣೆ ಎದುರಿಸದ ಏಕೈಕ ಸಚಿವ ನಾನು. ನನಗೆ ಮಾಹಿತಿಯನ್ನೂ ನೀಡದೆ ನನ್ನನ್ನು ಸಂಪುಟದಿಂದ ಹೊರಹಾಕಲಾಗಿದೆ. ನನ್ನ ವಜಾ ಮಾಡಿರುವ ನಿರ್ಧಾರವನ್ನು ಕ್ಯಾಬಿನೆಟ್ ಅಥವಾ ರಾಜಕೀಯ ವ್ಯವಹಾರಗಳ ಸಮಿತಿ ಕೈಗೊಂಡಿರಲಾರದು. ಇದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಏಕಪಕ್ಷೀಯ ನಿರ್ಧಾರವಾಗಿದೆ ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದು ಕಪಿಲ್ ಮಿಶ್ರಾ ಅವರು ಹೇಳಿಕೊಂಡಿದ್ದಾರೆ.