ಕಾಶ್ಮೀರ ಹಿಂಸಾಚಾರದಲ್ಲಿ ಪಾಕಿಸ್ತಾನದ ಕೈವಾಡ ಬಯಲು: ಬಿಜೆಪಿ

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅತಿರೇಕದ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ಪಾಕಿಸ್ತಾನವೇ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅತಿರೇಕದ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ಪಾಕಿಸ್ತಾನವೇ ಮುಖ್ಯ  ಕಾರಣವಾಗಿದೆ ಎಂಬ ವಾಸ್ತವವನ್ನು ಅರಿತುಕೊಳ್ಳುವ ಸಮಯ ಬಂದಿದೆ ಎಂದು ಭಾರತೀಯ ಜನತಾ ಪಕ್ಷ ಹೇಳಿದೆ.
ಜಮ್ಮು ಮತ್ತು ಕಾಶ್ಮೀರದ ಬಗ್ಗೆ ವಾಸ್ತವ ಸತ್ಯ ಬೇರೆಯೇ ಆಗಿದ್ದು ಅದನ್ನು ಜಗತ್ತಿಗೆ ಸಾರಬೇಕಾಗಿದೆ. ಸತ್ಯವನ್ನು ಅರಿತು ಕಣಿವೆ ರಾಜ್ಯದ ಜನರ ಪರಿಸ್ಥಿತಿಯನ್ನು ಸುಧಾರಿಸಲು ಪ್ರಯತ್ನಿಸಬೇಕಾಗಿದೆ ಎಂದು ಬಿಜೆಪಿ ನಾಯಕ ಸುದೇಶ್ ವರ್ಮ ಎಎನ್ಐ ಸುದ್ದಿ ಸಂಸ್ಥೆ ಜೊತೆ ಮಾತನಾಡುತ್ತಾ ಹೇಳಿದರು. ಕಾಶ್ಮೀರದಲ್ಲಿ ಸಮಸ್ಯೆಯನ್ನು ಸೃಷ್ಟಿಸುವುದೇ ಪಾಕಿಸ್ತಾನದ ಏಕೈಕ ಉದ್ದೇಶವಾಗಿದ್ದು ಪ್ರತಿಯೊಬ್ಬರಿಗೂ ಅದು ತಿಳಿದಿದೆ ಎಂದರು.
ಹುಸಿ ಉದಾರಾವಾದಿಗಳು ಸೇರಿದಂತೆ ಪ್ರತಿಯೊಬ್ಬರೂ ವಾಸ್ತವತೆಯನ್ನು ಅರಿತುಕೊಳ್ಳುವ ಸಮಯವಿದು. ಪಾಕಿಸ್ತಾನದ ತಪ್ಪು ಏನೂ ಇಲ್ಲವೆಂದು ವಾದಿಸಿ ಭಾರತೀಯ ಭದ್ರತಾ ಪಡೆಗಳ ವೈಫಲ್ಯವೆಂದು ಟೀಕಿಸುವವರು ಇದೀಗ ಸತ್ಯವನ್ನು ತಿಳಿದುಕೊಳ್ಳಬೇಕಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com