400 ಕೋಟಿ ರುಪಾಯಿ ನೀರಿನ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಿದ್ದು, ಪ್ರಕರಣದ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಎಸಿಬಿ ಮುಖ್ಯಸ್ಥ ಮೀನಾ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.