ಕೇಜ್ರಿವಾಲ್ ವಿರುದ್ಧ ಕಪಿಲ್ ಮಿಶ್ರಾ ಅವರು ಮಾಡುತ್ತಿರುವ ಗಂಭೀರ ಆರೋಪ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತಿರುಗೇಟು ನೀಡಿರುವ ಅವರು, ನನ್ನ ಮೈದುನ ಸುರೇಂದ್ರ ಕುಮಾರ್ ಬನ್ಸಾಲ್ ಅವರು ನಿಧನರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಮೂರ್ಖ ಮನುಷ್ಯ (ಕಪಿಲ್ ಮಿಶ್ರಾ) ಸಿದ್ಧಗೊಂಡ ಆರೋಪವನ್ನು ವಿವೇಚನೆ ಇಲ್ಲದೆಯೇ ಮಾಧ್ಯಮಗಳ ಮುಂದೆ ಹೇಳುತ್ತಿದ್ದಾನೆಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.