1861ರಲ್ಲಿ ಜನಿಸಿದ್ದ ಠಾಗೋರ್ ಅವರು ಆಗಸ್ಟ್ 7 1941ರಲ್ಲಿ ಕೊನೆಯುಸಿರೆಳೆದಿದ್ದರು. ಗುರದೇವ ಎಂಬ ಅಂಕಿತನಾಮದಲ್ಲಿ ಬರೆಯುತ್ತಿದ್ದ ಅವರು ಮಹಾ ವಿದ್ವಾಂಸ, ಕವಿಗಳಾಗಿ, ಕಾದಂಬರಿಕಾರರಾಗಿ, ಸಂಗೀತಕಾರರಾಗಿ ಮತ್ತು ನಾಟಕರಾಗಿ ಗುರ್ತಿಸಿಕೊಂಡಿದ್ದಾರೆ. ಗೀತಾಂಜಲಿ ಕಾವ್ಯಕ್ಕೆ 1913ರಲ್ಲಿ ನೊಬೆಲ್ ಸಾಹಿತ್ಯ ಪ್ರಶಸ್ತಿ ದೊರಕಿತ್ತು. ಈ ಮೂಲಕ ಅವರು ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಏಷ್ಯಾದ ಮೊದಲಿಗರು ಎಂಬ ಹೆಗ್ಗಳಿಕಗೆ ಪಾತ್ರರಾಗಿದ್ದಾರೆ.