ಲಖನೌ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಶಾಸಕ ನಸೀಮುದ್ದೀನ್ ಸಿದ್ಧಿಕೆ ಮತ್ತು ಆತನ ಪುತ್ರ ಅಫ್ಜಲ್ ನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ನಸೀಮುದ್ದೀನ್ ಸಿದ್ಧಿಕಿ ಅವರು ತಾನು ಮಾಡಿಕೊಟ್ಟ ಕೆಲಸಗಳಿಗಾಗಿ ಜನರಿಂದ ಹಣ ಪಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ ಎಂದು ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯರಾಗಿರುವ ಸತೀಶ್ ಚಂದ್ರ ಮಿಶ್ರಾ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಸತೀಶ್ ಚಂದ್ರ ಮಿಶ್ರಾ ಅವರು ಈ ರೀತಿಯ ಅಶಿಸ್ತನ್ನು ಮಾಯಾವತಿ ನೇತೃತ್ವದ ಬಿಎಸ್ಪಿ ಪಕ್ಷ ಎಂದೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.