ಕುಲಭೂಷಣ್ ಜಾದವ್ ಗೆ ಗಲ್ಲು ಶಿಕ್ಷೆ ಕೊಲೆಗೆ ಸಮಾನ: ಕೇಂದ್ರ ಸರ್ಕಾರ

ಪಾಕಿಸ್ತಾನ ಮಿಲಿಟರಿ ಕೋರ್ಟ್ ನಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾದವ್ ಗೆ...
ಕುಲಭೂಷಣ್ ಜಾಧವ್
ಕುಲಭೂಷಣ್ ಜಾಧವ್
ಧುಲೆ(ಮಹಾರಾಷ್ಟ್ರ): ಪಾಕಿಸ್ತಾನ ಮಿಲಿಟರಿ ಕೋರ್ಟ್ ನಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾದವ್ ಗೆ ಗಲ್ಲು ಶಿಕ್ಷೆ ನೀಡಬಾರದು ಎಂದು ಹೇಳಿರುವ ಕೇಂದ್ರ ಸರ್ಕಾರ ಪಾಕಿಸ್ತಾನ ಈ ನಿರ್ಧಾರ ತೆಗೆದುಕೊಂಡರೆ ಅದು ಕೊಲೆಗೆ ಸಮನಾಗುತ್ತದೆ ಎಂದು ಹೇಳಿದೆ.
ಕೇಂದ್ರ ರಕ್ಷಣಾ ಇಲಾಖೆ ರಾಜ್ಯ ಸಚಿವ ಸುಭಾಷ್ ಭಮ್ರೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ ಕುಲಭೂಷಣ್ ವಿರುದ್ಧ ಮಾಡಲಾಗಿರುವ ಆರೋಪ ಆಧಾರರಹಿತ. ಗೃಹ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡ ಅದನ್ನೇ ಹೇಳಿಕೊಂಡು ಬಂದಿದೆ.
ಪಾಕಿಸ್ತಾನಿ ಮಿಲಿಟರಿ ಕೋರ್ಟ್ ಘೋಷಿಸಿದ ಮರಣದಂಡನೆ ಶಿಕ್ಷೆ ತಪ್ಪು ಅದನ್ನು ನಾವು ಒಪ್ಪಲು ಸಾಧ್ಯವಿಲ್ಲ. ಅದನ್ನು ನಾವು ಕೊಲೆ ಎಂದು ಪರಿಗಣಿಸುತ್ತೇವೆ. ಪಾಕಿಸ್ತಾನದ ಮೇಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಲು ಭಾರತ ಸರ್ಕಾರ ಯಾವತ್ತೂ ಪ್ರಯತ್ನಿಸಿದೆ.  ನಮ್ಮ ಆಕಾಂಕ್ಷೆಯಂತೆಯೇ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶಕ್ಕೆ ತಡೆ ತಂದಿದೆ. ಭಾರತೀಯರು ಇದಕ್ಕೆ ಸಂತೋಷಗೊಂಡಿದ್ದಾರೆ ಎಂದು ಬಮ್ರೆ ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com