ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ನಾವು ತುಂಬಾ ಎಚ್ಚರಿಕೆಯಿಂದ ನಡೆದುಕೊಳ್ಳುತ್ತಿದ್ದೇವೆ. ಜಾಧವ್ ಭೇಟಿಗೆ ವಕೀಲರಿಗೆ ಅವಕಾಶ ನೀಡುವಂತೆ ಭಾರತ 16 ಬಾರಿ ಮನವಿ ಮಾಡಿದೆ. ಆದರೆ ಭಾರತದ ಮನವಿಗೆ ಪಾಕಿಸ್ತಾನ ಇದುವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ ಎಂದು ವಿದೇಶಾಂಗ ಸಚಿವಲಾಯದ ವಕ್ತಾರ ಗೋಪಾಲ್ ಬಗ್ಲಾಯ್ ಅವರು ಹೇಳಿದ್ದಾರೆ.