ಬಾರಾಮುಲ್ಲಾ ಜಿಲ್ಲೆ ರಾಮ್ಪುರ ಸೆಕ್ಟರ್ ಬಳಿ ಕಳೆದ ರಾತ್ರಿ ಉಗ್ರರ ಗುಂಪು ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿತ್ತು. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ದಿಟ್ಟ ಉತ್ತರವನ್ನು ನೀಡಿದ್ದು, ಉಗ್ರರ ಯತ್ನವನ್ನು ವಿಫಲವಾಗುವಂತೆ ಮಾಡಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.