ಯುವ ಸೇನಾಧಿಕಾರಿ ಉಮರ್ ಫಯಾಜ್ ಹತ್ಯೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಕ್ಷಣಾ ತಜ್ಞ ಪಿ.ಕೆ. ಸೆಹ್ಗಲ್ ಅವರು, ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಇತರೆ ಉಗ್ರ ಸಂಘಟನೆಗಳು ತಮ್ಮ ಶತ್ರುಗಳು ಎಂಬುದನ್ನು ಜಮ್ಮು ಮತ್ತು ಕಾಶ್ಮೀರ ಜನತೆ ಮನವರಿಕೆ ಮಾಡಿಕೊಳ್ಳಬೇಕಿದೆ. ಉಗ್ರರು ಹತ್ಯೆ ಮಾಡುವಾಗ ಕಾಶ್ಮೀರಿಗರೇ, ಅಲ್ಲವೇ ಎಂಬುದನ್ನು ಪರಿಶೀಲಿಸುವುದಿಲ್ಲ. ಕೊಲ್ಲುವುದಷ್ಟೇ ಅವರ ಉದ್ದೇಶವಾಗಿರುತ್ತದೆ ಎಂದು ಹೇಳಿದ್ದಾರೆ.