ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ನನ್ನ ಪುತ್ರ ಬಿಜೆಪಿ ಪಕ್ಷದ ಏಜೆಂಟ್ ಆಗಿದ್ದಾನೆಂದು ಆರೋಪಿಸಲಾಗುತ್ತಿದೆ. ಕೇಜ್ರಿವಾಲ್ ಅವರು ಈ ರೀತಿಯಾಗಿ ವರ್ತಿಸುತ್ತಾರೆಂದು ಎಂದಿಗೂ ಆಲೋಚಿಸಿರಲಿಲ್ಲ. ಕೇಜ್ರಿವಾಲ್ ಅವರು ಮೊದಲು ಟ್ಯಾಂಕರ್ ಹಗರಣ ಕುರಿತಂತೆ ಮಾತನಾಡಬೇಕಿದೆ. ಆಪ್ ಗೆ ಸೇರ್ಪಡೆಗೊಳ್ಳಬೇಕೆಂದು ನನ್ನ ಮಗ ಎಂದಿಗೂ ಚಿಂತಿಸಿರಲಿಲ್ಲ. ಆದರೆ, ಕೇಜ್ರಿವಾಲ್ ಅವರೇ ಕಪಿಲ್ ಮಿಶ್ರಾ ಆಪ್'ಗೆ ಸೇರ್ಪಡೆಗೊಳಿಸಬೇಕೆಂದು ಬಯಸಿದ್ದರು ಎಂದು ಹೇಳಿದ್ದಾರೆ.