ಕಳೆದ ಮೂರು ದಿನಗಳಿಂದಲೂ ಪ್ರತೀನಿತ್ಯ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಇಂದೂ ಕೂಡ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇಂದು ನಡೆಸಿದ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, ಓರ್ವ ನಾಗರಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಗಡಿಯಲ್ಲಿರುವ ಶಾಲಾಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.