ದೇಶ
ಆರ್ ಎಸ್ಎಸ್ ಕಾರ್ಯಕರ್ತರ ಹತ್ಯೆ ದುರದೃಷ್ಟಕರ: ಕೇರಳ ಸಿಎಂ ವಿಜಯ್ ಪಿಣರಾಯಿ
ಸಿಎಂ ವಿಜಯ್ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದು, ಆರ್ ಎಸ್ಎಸ್ ಕಾರ್ಯಕರ್ತರ ಹತ್ಯೆ ದುರದೃಷ್ಟಕರ ಎಂದು ಹೇಳಿದ್ದಾರೆ.
ಕಣ್ಣೂರು: ಕೇರಳದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆರ್ ಎಸ್ಎಸ್ ಕಾರ್ಯಕರ್ತರ ಹತ್ಯೆ ಪ್ರಕರಣಗಳ ಬಗ್ಗೆ ಸಿಎಂ ವಿಜಯ್ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದು, ಆರ್ ಎಸ್ಎಸ್ ಕಾರ್ಯಕರ್ತರ ಹತ್ಯೆ ದುರದೃಷ್ಟಕರ ಎಂದು ಹೇಳಿದ್ದಾರೆ.
ಮೇ.12 ರಂದು ನಡೆದ ಆರ್ ಎಸ್ಎಸ್ ಕಾರ್ಯಕರ್ತನ ಹತ್ಯೆಯಾಗಿದ್ದು, ಈ ಪ್ರಕರಣ ಕಣ್ಣೂರಿನ ಶಾಂತಿಗೆ ಧಕ್ಕೆ ಉಂಟುಮಾಡಬಾರದು ಸಂಬಂಧಪಟ್ಟ ವ್ಯಕ್ತಿಗಳು ಶಾಂತಿ ಭಂಗ ಉಂಟಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಕರೆ ನೀಡಿದ್ದಾರೆ. ಆರ್ ಎಸ್ಎಸ್ ಕಾರ್ಯಕರ್ತನ ಹತ್ಯೆಯ ಆರೋಪಿಗಳನ್ನು ಶಿಕ್ಷೆಗೊಳಪಡಿಸಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ ಎಂದು ವಿಜಯ್ ಪಿಣರಾಯಿ ಭರವಸೆ ನೀಡಿದ್ದಾರೆ.
ಇದೇ ವೇಳೆ ಕಣ್ಣೂರು ಜಿಲ್ಲೆಯಲ್ಲಿ ಪದೇ ಪದೇ ಆರ್ ಎಸ್ಎಸ್ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದು ಕಣ್ಣೂರನ್ನು ಸೂಕ್ಷ್ಮ(ಪ್ರಕ್ಷುಬ್ಧ)ಪ್ರದೇಶ ಎಂದು ಘೋಷಿಸಬೇಕೆಂದು ಬಿಜೆಪಿ ಆಗ್ರಹಿಸಿದ್ದು, ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.