ಕೂಚ್ ಬೆಹಾರ್: ಪಶ್ಚಿಮ ಬಂಗಾಳದ ಆಡಳಿತರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಕಾರ್ಯಕರ್ತರು ಶನಿವಾರ ಇಬ್ಬರು ಬಿಜೆಪಿ ನಾಯಕರ ಮೇಲೆ ದಾಳಿ ನಡೆಸಿದ್ದಾರೆ,
ಬಿಜೆಪಿ ನಾಯಕರು ಪ್ರಯಾಣಿಸುತ್ತಿದ್ದ ಕಾರ್ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದು, ದಾಳಿಯಲ್ಲಿ ನಾಯಕರ ಕಾರು ಧ್ವಂಸಗೊಂಡಿದೆ.
2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಾಗಾಗ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿರುವುದರಿಂದ ರಾಜ್ಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ನಿನ್ನೆಯಷ್ಚೇ ಬುರ್ದ್ವಾನ್ ಜಿಲ್ಲೆಯ ಆಶಗ್ರಾಮ್ ನ ಟಿಎಂಸಿ ಕಚೇರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದರು ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಇಂದು ಮತ್ತೊಂದು ಅಹಿತಕರ ಘಟನೆ ನಡೆದಿದೆ.