ಗುರುದಾಸ್'ಪುರ: ಗಡಿನುಸುಳುತ್ತಿದ್ದ ಉಗ್ರನನ್ನು ಸದೆಬಡಿದ ಸೇನೆ

ಗುರುದಾಸ್'ಪುರದ ಬಳಿ ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರನೊಬ್ಬನನ್ನು ಭಾರತೀಯ ಸೇನೆ ಸೋಮವಾರ ಹತ್ಯೆ ಮಾಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಗುರುದಾಸ್ಪುರ: ಗುರುದಾಸ್'ಪುರದ ಬಳಿ ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರನೊಬ್ಬನನ್ನು ಭಾರತೀಯ ಸೇನೆ ಸೋಮವಾರ ಹತ್ಯೆ ಮಾಡಿದೆ. 
ನಿನ್ನೆಯಷ್ಟೇ ಇಂಡೋ-ನೇಪಾಳ ಗಡಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ಇದರ ಬೆನ್ನಲ್ಲೇ ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರನೊಬ್ಬನನ್ನು ಗುಂಡಿಟ್ಟು ಹತ್ಯೆ ಮಾಡಿದೆ. 
ತಂತಾ ದೋಡಾ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಮೇ.7 ರಂದು ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಪೊಲೀಸರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಘಟಕದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಐವರು ಉಗ್ರನ್ನು ಬಂಧನಕ್ಕೊಳಪಡಿಸಿರುವುದಾಗಿ ಶನಿವಾರ ಅಧಿಕಾರಿಗಳು ಖಚಿತಪಡಿಸಿದ್ದರು. 
ಗಡಿಯಲ್ಲು ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಸೇನೆ ಗಡಿಯಲ್ಲಿ ಮತ್ತಷ್ಟು ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೃಷ್ಣಘಾಟಿಯಲ್ಲಿ ನಡೆದ ಘಟನೆ ಬಳಿಗ ಗಡಿ ನುಸುಳುಕೋರರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com