ಜಮ್ಮ-ಕಾಶ್ಮೀರ: ಬಸ್ ನಿಲ್ದಾಣದ ಬಳಿ ಸ್ಫೋಟ- ಓರ್ವ ವ್ಯಕ್ತಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕಿಶ್ತ್ವಾರ್ ಜಿಲ್ಲೆಯ ಬಸ್ ನಿಲ್ದಾಣವೊಂದರ ಬಳಿ ಸ್ಫೋಟವೊಂದು ಸಂಭವಿಸಿದ್ದು, ವ್ಯಕ್ತಿಯೊಬ್ಬರಿಗೆ ಗಾಯವಾಗಿರುವ...
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕಿಶ್ತ್ವಾರ್ ಜಿಲ್ಲೆಯ ಬಸ್ ನಿಲ್ದಾಣವೊಂದರ ಬಳಿ ಸ್ಫೋಟವೊಂದು ಸಂಭವಿಸಿದ್ದು, ವ್ಯಕ್ತಿಯೊಬ್ಬರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.
ಇಂದು ಬೆಳಿಗ್ಗೆ 7.30ರ ಸುಮಾರಿದೆ ಕಿಶ್ತ್ವಾರ್ ಟೌನ್ ಬಳಿಯಿರುವ ಮಿನಿ ಬಸ್ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡ ವ್ಯಕ್ತಿಯನ್ನು ರಾಜ್ ಕುಮಾರ್ ಎಂದು ಗುರ್ತಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಸ್ಫೋಟ ಸಂಭವಿಸಿದ ಹಿನ್ನಲೆಯಲ್ಲಿ ಸ್ಥಳದಲ್ಲಿದ್ದ ಹಲವು ವಾಹನಗಳು ನಾಶಗೊಂಡಿವೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.