ನವದೆಹಲಿ: ಚಾರ್ ಧಾಮ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಸಂಪೂರ್ಣವಾಗಿ ವೈದ್ಯಕೀಯ ನೆರವು ನೀಡಲಾಗುತ್ತದೆ ಎಂದು ಕೇಂದ್ರದ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬುಧವಾರ ಭರವಸೆ ನೀಡಿದ್ದಾರೆ.
ಕಳೆದ 19 ತಿಂಗಳಿನ ಚಾರ್ ಧಾಮ್ ಯಾತ್ರೆಯಲ್ಲಿ 16-17 ಭಕ್ತರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಯಾತ್ರೆಯಲ್ಲಿ ಸೂಕ್ತ ರೀತಿಯ ವೈದ್ಯಕೀಯ ವ್ಯವಸ್ಥೆಯಿಲ್ಲದಿರುವುದಕ್ಕೆ ಭಕ್ತರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ನಡ್ಡಾ ಅವರು, ಯಾತ್ರೆಗೆ ತೆರಳುವ ಭಕ್ತರಿಗೆ ಸಂಪೂರ್ಣ ವೈದ್ಯಕೀಯ ನೆರವು ನೀಡಲಾಗುತ್ತದೆ ಎಂದು ಹೇಳಿದ್ದಾರೆ.