ಅರುಣಾಚಲ ಪ್ರದೇಶದಲ್ಲಿ ಚಂಡಮಾರುತ: ಓರ್ವ ಸಾವು, 100 ಕ್ಕೂ ಅಧಿಕ ಮನೆಗಳು ನಾಶ

ಅರುಣಾಚಲ ಪ್ರದೇಶದಲ್ಲಿ ಉಂಟಾದ ಬಿರುಗಾಳಿ, ಚಂಡಮಾರುತ ಹಾಗೂ ಸತತ ಮಳೆಯಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಇಟಾನಗರ್: ಅರುಣಾಚಲ ಪ್ರದೇಶದಲ್ಲಿ ಉಂಟಾದ ಬಿರುಗಾಳಿ, ಚಂಡಮಾರುತ ಹಾಗೂ ಸತತ ಮಳೆಯಿಂದಾಗಿ ವ್ಯಕ್ತಿಯೊಬ್ಬ ಮೃತಪಟ್ಟು 100ಕ್ಕೂ ಅಧಿಕ ಮಂದಿ ಮನೆ ಮನೆ  ಕಳೆದುಕೊಂಡಿದ್ದಾರೆ.
ನಿನ್ನೆ ಮುಂಜಾನೆ ಉಂಟಾದ ಸತತ ಮಳೆ, ಬಿರುಗಾಳಿಗೆ ನಾಮ್ಸೈ ಜಿಲ್ಲೆಯ ನ್ಯು ಮೊಹೊಂಗ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿರುಗಾಳಿ ಸುಮಾರು 90 ನಿಮಿಷಗಳ ಕಾಲ  ಸುರಿದಿದ್ದು ಸುಮಾರು 180 ಮನೆಗಳು ನಾಶವಾಗಿವೆ. ದನ ಕರುಗಳ ದೊಡ್ಡಿಗಳು, ನೀರು, ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿದೆ.
ಅಲ್ಲಲ್ಲಿ ಮರಗಳು ಉರುಳಿ ಬಿದ್ದು ರಸ್ತೆಗಳಲ್ಲಿ ಸಂಚಾರಕ್ಕೆ ವ್ಯತ್ಯಯವುಂಟಾಗಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸರು ರಕ್ಷಣೆಗೆ ಧಾವಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com