ಮೋದಿ ಸರ್ಕಾರದಿಂದ ದಕ್ಷಿಣ ಭಾರತ ಕಡೆಗಣನೆ: ರಮ್ಯಾ ವಾಗ್ದಾಳಿ

ಮೋದಿ ಸರ್ಕಾರ ದಕ್ಷಿಣ ಭಾರತವನ್ನು ಕಡೆಗಣಿಸುತ್ತಿದೆ. ಕರ್ನಾಟಕ 4702 ಕೋಟಿ ಬರಪರಿಹಾರ ಕೇಳಿದರೆ ಕೇವಲ 1786 ಕೋಟಿ ನೀಡಿದೆ. ತಮಿಳುನಾಡಿನಲ್ಲಿ ಭೀಕರ ...
ರಮ್ಯಾ
ರಮ್ಯಾ
ನವದೆಹಲಿ: ಮೋದಿ ಸರ್ಕಾರ ದಕ್ಷಿಣ ಭಾರತವನ್ನು ಕಡೆಗಣಿಸುತ್ತಿದೆ. ಕರ್ನಾಟಕ 4702 ಕೋಟಿ ಬರಪರಿಹಾರ ಕೇಳಿದರೆ ಕೇವಲ 1786 ಕೋಟಿ ನೀಡಿದೆ. ತಮಿಳುನಾಡಿನಲ್ಲಿ ಭೀಕರ ಬರಗಾಲವಿದೆ. ಹೀಗಿದ್ದಾಗ್ಯೂ ಪ್ರಧಾನಿ ಸಹಿತ ಯಾರೋಬ್ಬರು ಭೇಟಿ ನೀಡಿಲ್ಲ ಎಂದು ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಆರೋಪಿಸಿದ್ದಾರೆ.  
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ  ಬರಪೀಡಿತ ರಾಜ್ಯಗಳಿಗೆ ಭೇಟಿ ನೀಡುವ ಬದಲಿಗೆ ನರೇಂದ್ರ ಮೋದಿ ಶ್ರೀಲಂಕಾ ಪ್ರವಾಸಕ್ಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 
ಕಾಂಗ್ರೆಸ್ ಸೋಷಿಯಲ್ ಮೀಡಿಯಾ  ಮುಖ್ಯಸ್ಥೆಯಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಮ್ಯಾ ಸರ್ಕಾರ ಜನ ಕಲ್ಯಾಣ ಮಾಡುವ ಬದಲು ಮಾರ್ಕೆಟಿಂಗ್ ನಲ್ಲಿ ಹೆಚ್ಚು ಆಸಕ್ತಿ ತೋರುತ್ತಿದೆ ಎಂದು ದೂರಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com