ಕರ್ನಾಟಕ ರಾಜ್ಯ ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ಶವ ಪತ್ತೆ!

ಕರ್ನಾಟಕದ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಬುಧವಾರ ಶವವಾಗಿ ಪತ್ತೆಯಾಗಿದ್ದು , ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ....
ಅನುರಾಗ್ ತಿವಾರಿ
ಅನುರಾಗ್ ತಿವಾರಿ
Updated on
ಲಕ್ನೋ: ಕರ್ನಾಟಕದ ಐಎಎಸ್‌ ಅಧಿಕಾರಿ  ಅನುರಾಗ್‌ ತಿವಾರಿ ಬುಧವಾರ ಶವವಾಗಿ ಪತ್ತೆಯಾಗಿದ್ದು , ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. 
ಕೇಡರ್ 2007ರ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಅವರ ಲಕ್ನೋದ ಹಜರತ್ ಗಂಜ್ ನಲ್ಲಿರುವ ಮೀರಾಬಾಯಿ ಗೆಸ್ಟ್ ಹೌಸ್ ಬಳಿ ದೊರೆತಿದ್ದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. 
ತಿವಾರಿ ಅವರು, ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಮೀಷನರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗಷ್ಟೇ ನಾಲ್ಕು ವಾರಗಳ ರಜೆ ಮೇರೆಗೆ ಅವರು ತಮ್ಮ ಊರಿಗೆ ತೆರಳಿದ್ದರು.
1981ರ ಮೇ 17ರಂದು ಜನಿಸಿದ್ದ ಅನುರಾಗ್ ತಿವಾರಿ, ಅವರ ಹುಟ್ಟುಹಬ್ಬದಂದೇ (ಮೇ 17) ಶವವಾಗಿ ಪತ್ತೆಯಾಗಿರುವುದು ವಿಪರ್ಯಾಸ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com