ಡ್ರಾಮಾ ಇಸ್ ಓವರ್: ಸಿಬಿಐ ದಾಳಿ ಬಗ್ಗೆ ಕಾರ್ತಿ ಚಿದಂಬರಂ ಪ್ರತಿಕ್ರಿಯೆ

ಸಿಬಿಐ ದಾಳಿ ನಂತರ ಪ್ರತಿಕ್ರಿಯಿಸಿರುವ ಕಾರ್ತಿ ಚಿದಂಬರಂ ಡ್ರಾಮಾ ಇಸ್ ಓವರ್ ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ..
ಚಿದಂಬರಂ ಮತ್ತು ಕಾರ್ತಿ ಚಿದಂಬರಂ
ಚಿದಂಬರಂ ಮತ್ತು ಕಾರ್ತಿ ಚಿದಂಬರಂ
ಚೆನ್ನೈ: ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಹಾಗೂ ಅವರ ಪುತ್ರನಿಗೆ ಸೇರಿದ ಮನೆಯ ಮೇಲೆ ಸಿಬಿಐ ದಾಳಿ ನಂತರ ಪ್ರತಿಕ್ರಿಯಿಸಿರುವ ಕಾರ್ತಿ ಚಿದಂಬರಂ ಡ್ರಾಮಾ ಇಸ್ ಓವರ್ ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ  ಕಾರ್ತಿ ಚಿದಂಬರಂ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. 
ಮೇ.16 ರಂದು ಬೆಳಿಗ್ಗೆ ಕೇಂದ್ರೀಯ ತನಿಖಾ ದಳ(ಸಿಬಿಐ) ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಮನೆ ಮೇಲೆ ದಾಳಿ ನಡೆಸಿತ್ತು.
ಸುಮಾರು 45 ಕೋಟಿ ರೂಗಳಷ್ಟು ಮೊತ್ತಕ್ಕೆ ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ(ಎಫ್ಇಎಂಎ) ಯನ್ನು ಉಲ್ಲಂಘನೆ ಹಾಗೂ ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂಗೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. 
ಸಿಬಿಐ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದ ಚಿದಂಬರಂ ಇದೊಂದು ಸೇಡಿನ ರಾಜಕೀಯವಾಗಿದ್ದು, ನನ್ನ ಸದ್ದಡಗಿಸಲು ಹೀಗೆಲ್ಲಾ ಮಾಲಾಗುತ್ತಿದೆ ಎಂದು ದೂರಿದ್ದರು. ಇನ್ನು ತಮ್ಮ ತಂದೆಯ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕಾರ್ತಿ ಕೇಂದ್ರ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com