ಈ ಬಗ್ಗೆ ಮಾಹಿತಿ ನೀಡಿರುವ ಆಡಳಿತ ವ್ಯವಸ್ಥೆ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಸಿಂಘಾಲ್, ಟಿಕೆಟ್ ಮಾರಾಟ ಹಾಗೂ ಭಕ್ತಾದಿಗಳಿಗೆ ಸಂಬಂಧಿಸಿದ ಸೇವೆ ಒದಗಿಸುವ ಕಂಪ್ಯೂಟರ್ ಗಳು ಮಾತ್ರ ಹ್ಯಾಕ್ ಆಗಿದ್ದು, ಇದರಿಂದ ಭಕ್ತರಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ನೆರವಿನೊಂದಿಗೆ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವುದಾಗಿ ಆಡಳಿತ ವ್ಯವಸ್ಥೆ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಸಿಂಘಾಲ್ ಹೇಳಿದ್ದಾರೆ.