ಸ್ಥಳವನ್ನು ಸುತ್ತುವರೆದ ಪೊಲೀಸರು ಶರಣಾಗುವಂತೆ ರಂಜಿತ್'ಗೆ ತಿಳಿಸಿದ್ದಾರೆ. ಆದರೆ, ಇದಕ್ಕೆ ಒಪ್ಪದ ರಂಜಿತ್ ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾನೆ. ತದನಂತರ ಪೊಲೀಸರು ಆತ್ಮರಕ್ಷಣೆಗಾಗಿ ಎನ್ ಕೌಂಟರ್ ನಡೆಸಿ ರಂಜಿತ್ ನನ್ನು ಹತ್ಯೆ ಮಾಡಿದ್ದಾರೆ. ಸ್ಥಳದಲ್ಲಿ ಕೆಲ ಶಸ್ತ್ರಾಸ್ತ್ರಗಳು ಹಾಗೂ ಜೀವಂತ ಸಿಡಿಮದ್ದು ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ದೀಪಕ್ ಬರ್ನ್'ವಾಲ್ ಅವರು ತಿಳಿಸಿದ್ದಾರೆ.