ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿ, ಆರ್ ಎಸ್ಎಸ್ ತಕ್ಕ ಬೆಲೆ ತೆರಬೇಕಾಗುತ್ತದೆ: ಲಾಲು

ತಮ್ಮ ವಿರುದ್ಧದ ಭೂಹಗರಣ ಆರೋಪ ಹಾಗೂ ಇತ್ತೀಚಿನ ಆದಾಯ ತೆರಿಗೆ ಇಲಾಖೆ ದಾಳಿಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆರ್ ಎಸ್ಎಸ್...
ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್
ಪಾಟ್ನಾ: ತಮ್ಮ ವಿರುದ್ಧದ ಭೂಹಗರಣ ಆರೋಪ ಹಾಗೂ ಇತ್ತೀಚಿನ ಆದಾಯ ತೆರಿಗೆ ಇಲಾಖೆ ದಾಳಿಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆರ್ ಎಸ್ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ನನ್ನ ಮತ್ತು ನನ್ನ ಪಕ್ಷದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವ ಕೇಸರಿ ಪಕ್ಷ ತಕ್ಕ ಬೆಲೆ ತೆರಲಿದೆ ಎಂದು ಶುಕ್ರವಾರ ಹೇಳಿದ್ದಾರೆ.
'ನನ್ನ ಮತ್ತು ನನ್ನ ಪಕ್ಷಕ್ಕೆ ಕೆಟ್ಟ ಹೆಸರು ತರಬೇಕು ಎಂಬ ಉದ್ದೇಶದಿಂದ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ಆದರೆ ದೆಹಲಿ ಅಧಿಕಾರ ಶಾಶ್ವತವಲ್ಲ ಎಂಬುದನ್ನು ಬಿಜೆಪಿ ಮತ್ತು ಆರ್ ಎಸ್ಎಸ್ ಜನ ಅರ್ಥ ಮಾಡಿಕೊಳ್ಳಬೇಕು' ಲಾಲು ಪ್ರಸಾದ್ ಯಾದವ್ ಅವರು ಎಎನ್ಐಗೆ ತಿಳಿಸಿದ್ದಾರೆ.
ಬಿಜೆಪಿ ವರ್ತನೆ ಹೀಗೆ ಮುಂದುವರೆದರೆ ನರೇಂದ್ರ ಮೋದಿ ಸರ್ಕಾರ ಐದು ವರ್ಷದ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ. ಆಗಸ್ಟ್ 27ರಂದು ಗಾಂಧಿ ಮೈದಾನದಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿದ್ದು, ಇದಕ್ಕೆ ಸಮಾನ ಮನಸ್ಕ ನಾಯಕರಿಗೆ ಆಹ್ವಾನ ನೀಡಲಾಗಿದೆ ಎಂದರು.
ಇತ್ತೀಚಿಗಷ್ಟೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್ ಅವರ ಕಂಪನಿ ಮತ್ತು ಅವರ ಆಪ್ತರ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com