ಬಾಬ್ರಿ ಧ್ವಂಸ ಪ್ರಕರಣ: ಐವರು ಆರೋಪಿಗಳು ಕೋರ್ಟ್ ಗೆ ಶರಣು, ಬಳಿಕ ಜಾಮೀನು

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಶನಿವಾರ.....
ಬಾಬ್ರಿ ಮಸೀದಿ
ಬಾಬ್ರಿ ಮಸೀದಿ
ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಶನಿವಾರ ಐವರು ಆರೋಪಿಗಳು ಕೋರ್ಟ್ ಮುಂದೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ.
ಆರೋಪಿಗಳಾದ ರಾಮ್ ವಿಲಾಸ್ ವೇದಾಂತಿ, ಚಂಪತ್ ರೈ ಬನ್ಸಾಲ್, ಮಹಾಂತ್ ನೃತ್ಯ ಗೋಪಾಲ್ ದಾಸ್, ಮಹಂತ್ ಧರ್ಮ ದಾಸ್ ಹಾಗೂ ಬಿಎಲ್ ಶರ್ಮಾ ಅವರು ಇಂದು ಕೋರ್ಟ್ ಗೆ ಶರಣಾಗಿದ್ದಾರೆ. 
ಮತ್ತೊಬ್ಬ ಆರೋಪಿ ಸತೀಶ್ ಪ್ರಧಾನ್ ಸೇರಿದಂತೆ ಆರು ಆರೋಪಿಗಳಿಗೆ ಮೇ 20ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ವಿಶೇಷ ಕೋರ್ಟ್ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಐವರು ಹಾಜರಾಗಿದ್ದಾರೆ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಧಾನ್ ಕೋರ್ಟ್ ಹಾಜರಾಗಿಲ್ಲ.
ವಿಚಾರಣೆ ಬಳಿಕ ಐವರು ಆರೋಪಿಗಳಿಗೆ ತಲಾ 20,000 ರುಪಾಯಿ ವೈಯಕ್ತಿಕ ಬಾಂಡ್ ಮೇಲೆ ಸಿಬಿಐ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com