ಉತ್ತರಪ್ರದೇಶ: ಬಸ್'ಗೆ ಬೆಂಕಿ ತಗುಲಿ 4 ಸಾವು, 15 ಜನರಿಗೆ ಗಾಯ

ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಬಸ್ ಮೇಲೆ ಹೈ-ಟೆನ್ಶನ್ ವೈಯರ್ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಉತ್ತರಪ್ರದೇಶದ ಬಂದಾ ಜಿಲ್ಲೆಯಲ್ಲಿ...
ಉತ್ತರಪ್ರದೇಶ: ಬಸ್'ಗೆ ಬೆಂಕಿ ತಗುಲಿ 4 ಸಾವು, 15 ಜನರಿಗೆ ಗಾಯ
ಉತ್ತರಪ್ರದೇಶ: ಬಸ್'ಗೆ ಬೆಂಕಿ ತಗುಲಿ 4 ಸಾವು, 15 ಜನರಿಗೆ ಗಾಯ
ಬಂದಾ: ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಬಸ್ ಮೇಲೆ ಹೈ-ಟೆನ್ಶನ್ ವೈಯರ್ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿ 15ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಉತ್ತರಪ್ರದೇಶದ ಬಂದಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 
ಬೆಳಿಗ್ಗೆ 9.30 ರ ಸುಮಾರಿಗೆ ಘಟಡನೆ ನಡೆದಿದೆ. ಜಸ್ಪುರ್ ಬಳಿ ಬಸ್ ಸಂಚಿರಿಸುತ್ತಿತ್ತು. ಈ ವೇಳೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಗುದ್ದಿದೆ. ಪರಿಣಾಮ ವಿದ್ಯುತ್ ಕಂಬದ ಹೈ-ಟೆನ್ಶನ್ ವೈಯರ್ ಬಸ್ ಮೇಲೆ ಬಿದ್ದು, ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. 
ಪರಿಣಾಮ ಸ್ಥಳದಲ್ಲಿಯ ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್ ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com