2004 ರಲ್ಲಿ ದಾಭೋಲ್ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಭಾರತ ಸರ್ಕಾರವನ್ನು ಹರೀಶ್ ಸಾಳ್ವೆ ಪ್ರತಿನಿಧಿಸುತ್ತಿದ್ದರು. ಆದರೆ ಮಾಜಿ ಪ್ರಧಾನಿ ವಾಜಪೇಯಿ ಅವರ ಸರ್ಕಾರದ ಅವಧಿ ಮುಕ್ತಾಯಗೊಂಡ ನಂತರ ಅಸ್ತಿತ್ವಕ್ಕೆ ಬಂದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಹರೀಶ್ ಸಾಳ್ವೆ ಅವರನ್ನು ತೆಗೆದು ಭಾರತ ಸರ್ಕಾರದ ಪರ ವಾದ ಮಾಡಲು ಪಾಕಿಸ್ತಾನ ಮೂಲದ ಬ್ರಿಟೀಷ್ ನಾಗರಿಕರಾಗಿರುವ ಖವರ್ ಖುರೇಷಿ ಅವರನ್ನು ನೇಮಕ ಮಾಡಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೇ ಖವರ್ ಖುರೇಷಿ ಈಗ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನದ ಪರ ಅಂತಾರಾಶ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.