ಮಾಜಿ ಬಿಗ್ ಬಾಸ್ ಸ್ಪರ್ಧಿ ಓಂ ಸ್ವಾಮಿಗೆ ಸಾರ್ವಜನಿಕರಿಂದ ಧರ್ಮದೇಟು!

ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿ ಕೊಡುವ ಹಿಂದಿಯ ಬಿಗ್ ಬಾಸ್ 10ರ ಸ್ಪರ್ಧಿಯಾಗಿದ್ದ ವಿವಾದಿತ ಓಂ ಸ್ವಾಮಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ...
ಓಂ ಸ್ವಾಮಿ
ಓಂ ಸ್ವಾಮಿ
ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿ ಕೊಡುವ ಹಿಂದಿಯ ಬಿಗ್ ಬಾಸ್ 10ರ ಸ್ಪರ್ಧಿಯಾಗಿದ್ದ ವಿವಾದಿತ ಓಂ ಸ್ವಾಮಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.
ದೆಹಲಿಯ ವಿಕಾಸ್ ನಗರದಲ್ಲಿ ನಾಥುರಾಮ್ ಗೋಡ್ಸೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಓಂ ಸ್ವಾಮಿಯನ್ನು ಕರೆಸಲಾಗಿತ್ತು. ಇವರನ್ನು ಕಂಡ ಮಹಿಳೆಯ ಆತನನ್ನು ಕಾರ್ಯಕ್ರಮದಿಂದ ಹೊರಹಾಕುವಂತೆ ಕೂಗಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಂದ ಓಂ ಸ್ವಾಮಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ತನ್ನನ್ನು ಯಾಕೆ ಹೊಡೆಯುತ್ತಿದ್ದಾರೆ ಎಂಬುದು ಅರಿವಾಗದೆ ಓಂ ಸ್ವಾಮಿ ಕಕ್ಕಾಬಿಕ್ಕಿಯಾಗಿದ್ದು ಸ್ಥಳದಿಂದ ಕಾಲು ಕಿತ್ತಿದ್ದಾರೆ. ಇನ್ನು ಓಂ ಸ್ವಾಮಿ ಈ ಹಿಂದೆ ಟಿವಿ ಶೋವೊಂದರಲ್ಲಿ ಮಹಿಳೆಯೊಬ್ಬರೊಂದಿಗೆ ಕೈ ಕೈ ಮಿಲಾಯಿಸಿದ್ದರು. 
ಇತ್ತೀಚೆಗಷ್ಟೇ ಯೋಗ ಕಲಿಸುವುದಾಗಿ ಯುವತಿಯನ್ನು ಕರೆಯಿಸಿ ಆಕೆಗೆ ಅರೆ ನಗ್ನ ಯೋಗ, ಧ್ಯಾನ ಎಂದೆಲ್ಲ ವಿಡಿಯೋ ಮಾಡಿ ಇಂಟರ್ ನೆಟ್ ಗೆ ಬಿಟ್ಟಿದ್ದರು. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com