ದೆಹಲಿಯ ವಿಕಾಸ್ ನಗರದಲ್ಲಿ ನಾಥುರಾಮ್ ಗೋಡ್ಸೆ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಓಂ ಸ್ವಾಮಿಯನ್ನು ಕರೆಸಲಾಗಿತ್ತು. ಇವರನ್ನು ಕಂಡ ಮಹಿಳೆಯ ಆತನನ್ನು ಕಾರ್ಯಕ್ರಮದಿಂದ ಹೊರಹಾಕುವಂತೆ ಕೂಗಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಂದ ಓಂ ಸ್ವಾಮಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.